ಬೆಂಗಳೂರು: ‘ನೀವು ನಿರಾತಂಕವಾಗಿ ಉತ್ತಮ ಆಡಳಿತ ನೀಡುವತ್ತ ಗಮನಹರಿಸಿ. ಅಭಿವೃದ್ಧಿಯ ವೇಗ ಹೆಚ್ಚಿಸಿ. ಎಲೆಕ್ಷನ್, ರಾಜಕೀಯದಂತ ಬಾಕಿ ವಿಚಾರಗಳನ್ನು ನಮಗೆ ಬಿಡಿ. ಅವುಗಳನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರ ತಡರಾತ್ರಿ ಅಮಿತ್ ಶಾ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಖಾಸಗಿ ಹೋಟೆಲ್ನಲ್ಲಿ ಬೊಮ್ಮಾಯಿ ಅವರೊಂದಿಗೆ ಸುಮಾರು ಅರ್ಧ ಗಂಟೆ ಕಾಲ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಬಳಿಕ ಬೊಮ್ಮಾಯಿ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟರು ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

