Breaking News

ಪಿಎಸ್‌ಐ ನೇಮಕಾತಿ ಅಕ್ರಮ : ಡಿವೈಎಸ್‌ಪಿ, ಎಸ್ಪಿ ಅಮಾನತು

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಆರೋಪದ ಮೇಲೆ ಕಲಬುರಗಿ ಬೆರಳಚ್ಚು ವಿಭಾಗದ ಡಿವೈಎಸ್‌ಪಿ ಆರ್‌.ಆರ್‌. ಹೊಸಮನಿ ಮತ್ತು ಮಹಿಳಾ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ದಿಲೀಪ್‌ ಸಾಗರ್‌ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.

ಪರೀಕ್ಷಾ ಅಕ್ರಮ ನಡೆದಿರುವ ಕಲಬುರಗಿಯ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿಯಾಗಿ ಆರ್‌.ಆರ್‌. ಹೊಸಮನಿ ಮತ್ತು ಮೇಲ್ವಿಚಾರಕರಾಗಿ ದಿಲೀಪ್‌ ಸಾಗರ್‌ ಕಾರ್ಯನಿರ್ವಹಿಸಿದ್ದರು. ಈ ಇಬ್ಬರೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಿರುವ ಕಾರಣದಿಂದ ಅಮಾನತು ಮಾಡಲಾಗಿದೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿಯಾಗಿ ಡಿವೈಎಸ್‌ಪಿ ಹುಲ್ಲೂರು ಅವರನ್ನು ನೇಮಿಸಲಾಗಿತ್ತು. ಸಂಬಂಧಿಕರೊಬ್ಬರು ನಿಧನರಾಗಿದ್ದಾರೆ ಎಂಬ ಕಾರಣ ನೀಡಿ ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲೇ ಹುಲ್ಲೂರು ಕರ್ತವ್ಯದಿಂದ ಬಿಡುಗಡೆಯಾಗಿದ್ದರು. ಬಳಿಕ ಹೊಸಮನಿ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಇಬ್ಬರೂ ಪೂರ್ವಯೋಜಿತವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದರು. ಹುಲ್ಲೂರು ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ ಎಂದು ಮೂಲಗಳು ಹೇಳಿವೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *