ಹಾವೇರಿ: ಹಾವೇರಿ ಜಿಲ್ಲೆಯ ಹಲವೆಡೆ ಸಿಡಿಲು ಗುಡುಗಿನೊಂದಿಗೆ ಮಳೆರಾಯನ ಆರ್ಭಟ ನಡೆದಿದ್ದು, ಹಾವೇರಿ, ಸವಣೂರು ತಾಲೂಕಿನ ಹಲವೆಡೆ ಮಳೆಯಾಗಿದೆ. ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಗೆ ಗಾಯವಾಗಿದೆ. ಸಣ್ಣಮ್ಮ ಕರಕಣ್ಣವರ ಎಂಬ ಮಹಿಳೆಗೆ ಗಾಯವಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ಮಹಿಳೆ ಮಳೆ ಬರುತ್ತಿದ್ದ ವೇಳೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಗಾಯವಾಗಿತ್ತು. ಗಾಯಾಳುವಿಗೆ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

