ಧಾರವಾಡ: ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರ ಹಲವು ಆರೋಪಗಳಿಗೆ ಗುರಿಯಾಗಿ ಸೋಲು ಕಂಡಿದ್ದ ಮಾಜಿ ಸಚಿವ ಸಂತೋಷ ಲಾಡ್ ಅವರು ಈಗ ಕ್ಷೇತ್ರದಲ್ಲಿ ಭರ್ಜರಿ ಚುನಾವಣೆ ತಯಾರಿ ನಡೆಸಿದ್ದಾರೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಕ್ಷೇತ್ರದ ಕಡೆ ಮುಖ ಮಾಡಿರುವ ಲಾಡ ಅವರು ಈಗ ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ಹಾಗೂ ಸ್ಥಳೀಯ ಮಹಿಳೆಯರಿಗೆ ಜಾತ್ರೆಯ ಉಡುಗೊರೆ ನೀಡುವ ಮೂಲಕ ಮತಗಳನ್ನು ಸೆಳೆಯುತ್ತಿದ್ದಾರೆ.

ಕಲಘಟಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸುತಗಟ್ಟಿ ಗ್ರಾಮದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಅವರು ಗ್ರಾಮದ ಮಹಿಳೆಯರಿಗೆ ಸೀರೆಗಳನ್ನು ನೀಡಿದ್ದು, ಅದೂ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗಿದೆ. ಗ್ರಾಮದ ಶ್ರೀ ಅಂಜನೇಯ ದೇವಸ್ಥಾನ ಜಾತ್ರಾ ಮಹೋತ್ಸವ ಇದರ ವ ಹಿನ್ನೆಲೆಯಲ್ಲಿ ಸೀರೆಗಳನ್ನು ಹಂಚಿಕೆ ಮಾಡಲಾಗಿದ್ದು, ಇದೂ ಈಗ ಕ್ಷೇತ್ರ ವ್ಯಾಪ್ತಿಯಲ್ಲಿ ಲಾಡ್ ಅವರ ಚುನಾವಣೆ ತಯಾರಿಯನ್ನು ಎತ್ರಿ ತೋರುತ್ತಿದೆ.

ಟಿಕೆಟ್ ಘೋಷಣೆಗೂ ಮುನ್ನವೇ ಲಾಡ್ರಿಂದ ಕ್ಷೇತ್ರದಲ್ಲಿ ಮತಭೇಟೆ.
ಈ ಹಿಂದೆ ಮಾಜಿ ಸಚಿವ ಸಂತೋಷ ಲಾಡ್ ಅವರನ್ನು ಕಲಘಟಗ ವಿಧಾನಸಭಾ ಕ್ಷೇತ್ರದ ಮತದಾರರು ಎರಡು ಬಾರಿ ಸತತವಾಗಿ ಆಯ್ಕೆ ಮಾಡಿದರು. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಂಮತ್ರಿಯಾಗಿದ್ದಾಗ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಈ ಎರಡು ಅವಧಿಯಲ್ಲಿ ಲಾಡ್ ಅವರು ಚುನಾವಣೆ ಬಂದಾಗ ಮಾತ್ರ ಕ್ಷೆಡತ್ರದ ಕಡೆ ಬರುತ್ತಾರೆ ಎಂಬ ಗಂಭೀರ ಆರೋಪವಮ್ನು ಮತದಾರರು ಮಾಡುವ ಜೊತೆಗೆ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸ್ಥಳೀಯ ನಾಯಕತ್ವಕ್ಕೆ ಪ್ರಾಮುಖ್ಯತೆ ನೀಡಿ, ಸಿ ಎಂ ನಿಂಬಣ್ಣನವರನ್ನು ಶಾಸಕರಾಗಿ ಆಯ್ಕೆ ಮಾಡಿ ಲಾಡ್ ಅವರಿಗೆ ಸೋಲಿನ ರುಚ್ಚಿ ತೋರಿಸಿದ್ದು, ಈಗ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಹಾಗೂ ಟಿಕೆಟ್ ಘೋಷಣೆಗೂ ಮುನ್ನವೇ ಲಾಡ್ ಅವರು ಮತಭೇಟೆ ಆರಂಭಿಸಿದ್ದಾರೆ.
ಒಟ್ಟಿನಲ್ಲಿ ಈಗ ಕಲಘಟಗಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ್ ಛಬ್ಬಿ ಹಾಗೂ ಮಾಜಿ ಸಚಿವ ಸಂತೋಷ ಲಾಡ್ ಅವರ ನಡುವೆ ಬಿಗ್ ಫೈಟ್ ನಡೆದಿದ್ದು, ಇಬ್ಬರು ಕೈ ನಾಯಕರು ಈಗ ಕ್ಷೇತ್ರದಲ್ಲಿ ತಮ್ಮ ತಮ್ಮ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಆದರೆ ಈಗ ಅಂತಿಮವಾಗಿ ಜನರು ಯಾರಿಗೆ ಗೆಲ್ಲವಿನ ಹಾರ ನೀಡುತ್ತಾರೆ ಎಂಬುವುದನ್ನು, 2024ರ ವಿಧಾನ ಸಭಾ ಚುನಾವಣೆಯ ಮತದಾನದ ನಂತರವಷ್ಟೇ ತಿಳಿದು ಬರಬೇಕಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

