ಹಾಸನ: ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ತವರು ಕ್ಷೇತ್ರದಿಂದ ಇಬ್ಬರು ಶಾಸಕರು ಹಾಜರಾಗಿರುವುದು ಕಂಡು ಬಂದಿತ್ತು.
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ಅವರು ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದರು.
ಜೆಡಿಎಸ್ ಮುಖಂಡರಾದ ಎಚ್.ಡಿ.ರೇವಣ್ಣ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಜತೆಗಿನ ಭಿನ್ನಾಭಿಪ್ರಾಯದಿಂದ ಶಿವಲಿಂಗೇಗೌಡ ಎರಡು ತಿಂಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

