ಧಾರವಾಡ ಜೆ ಎಸ್ ಎಸ್ ಕಾಲೇಜಿನ ಎದುರುಗಡೆ ಬೆಂಕಿ ಅವಘಡ ಸಂಭವಿಸಿ ಕಾರು ಹೊತ್ತಿ ಉರಿದ ಘಟನೆ ನಡೆದಿದ್ದು
ಅಗ್ನಿ ಶಾಮಕ ದಳ ಹರಸಾಹಸ ಪಟ್ಟು ಬೆಂಕಿ ನಂದಿಸಿದೆ . ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ

ಹುಬ್ಬಳ್ಳಿಯ ನಿವಾಸಿಯಾಗಿದ್ದ , ವಿಜಯಸಾಗರ ಕುಟುಂಬ ಸಮೇತ ಧಾರವಾಡಕ್ಕೆ ಬರುವಾಗ ಜೆ ಎಸ್ ಎಸ್ ಕಾಲೇಜು ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ
ಈ ವೇಳೆ ಕಾರಿನಲ್ಲಿ ಗಂಡ – ಹೆಂಡತಿ ಇಬ್ಬರು ಮಕ್ಕಳು ಪ್ರಯಾಣ ಮಾಡುತ್ತಿದ್ದರು . ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸಾರ್ವಜನಿಕರು ಕಾರಿನಲ್ಲಿ ಇದ್ದ ಕುಟುಂಬವನ್ನ ರಕ್ಷಣೆ ಮಾಡಿದ್ದಾರೆ

ಇನ್ನು ಘಟನಾ ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

