Breaking News

ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ : ಕುಮಾರಸ್ವಾಮಿ


ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ. ಜನತಾ ಜಲಧಾರೆ ಮೂಲಕ ಜೆಡಿಎಸ್‌ ಅಸ್ತಿತ್ವ ಸಾಬೀತಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ತಲುಪುತ್ತೇವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ ನಿಂದ ಎಚ್‌.ಕೆ.ರಾಮು ಅವರಿಗೆ ಟಿಕೆಟ್‌ ನೀಡಿದ್ದು ಕುಮಾರಸ್ವಾಮಿ ಅಲ್ಲ. ಪಕ್ಷದ ಕೋರ್‌ ಕಮಿಟಿ. ಇದು ವೈಯಕ್ತಿಕ ತೀರ್ಮಾನ ಅಲ್ಲ. ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ ಎಂಬುದು ಜಗಜ್ಜಾಹೀರಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಸಕ ಮರಿತಿಬ್ಬೇಗೌಡರು ನಮ್ಮ ಪಕ್ಷದಲ್ಲಿ ಇಲ್ಲದಾಗಲೂ ನಾವು ಚುನಾವಣೆ ಗೆದ್ದಿದ್ದೇವೆ. ಇನ್ನು ಹಣ ಇದ್ದವರಿಗಷ್ಟೇ ಟಿಕೆಟ್‌ ಎನ್ನುವುದಾದರೆ, ಈ ಹಿಂದೆ ಚಿಕ್ಕಮಾದು ಅವರಿಗೆ ಶ್ರೀಮಂತರು ಅಂತ ನಮ್ಮ ಪಕ್ಷದಿಂದ ಟಿಕೆಟ್‌ ಕೊಟ್ಟಿದ್ದಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Share News

About BigTv News

Check Also

Featured Video Play Icon

ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…

ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ …

Leave a Reply

Your email address will not be published. Required fields are marked *

You cannot copy content of this page