ಧಾರವಾಡ : ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮೇ 27 , 28 , 29 ರಂದು ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳವನ್ನು ಕಾರಣಾಂತರಗಳಿಂದ ಮೂಂದೂಡಲಾಗಿದೆ .
ಐಎಂಡಿ ಮುನ್ಸೂಚನೆಯ ಪ್ರಕಾರ ರೈತರು ಬಿತ್ತನೆ ಪೂರ್ವ ಮತ್ತು ಬಿತ್ತನೆ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಮತ್ತು ಮಾದರಿ ನೀತಿ ಸಂಹಿತೆಯು ಜಾರಿ ಇರುವುದರಿಂದ ಕೃಷಿ ಮೇಳವನ್ನು ಮುಂದೂಡಲಾಗಿದೆ.ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು . ಮತ್ತು ವಿಶ್ವವಿದ್ಯಾಲಯದಲ್ಲಿ ಬೀಜಗಳ ಮಾರಾಟವು ಮೇ .23 ರಿಂದ ಪ್ರಾರಂಭವಾಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ .