ಧಾರವಾಡ : ಪೇಡಾ ನಗರಿ ಪ್ರತ್ಯೇಕ ಮಹಾನಗರ ಪಾಲಿಕೆ ಆಗುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಬೇಕು ಜೊತೆಗೆ ನವೆಂಬರ್ ಒಳಗೆ ಪ್ರತ್ಯೇಕ ಪಾಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಆಗ್ರಹಿಸಿದರು.
ಧಾರವಾಡದಲ್ಲಿ ಮಾತಾನಾಡಿದ ಅವರು ಹು – ಧಾ ಅವಳಿ ನಗರ ಪಾಲಿಕೆಯಿಂದ ಅನುದಾನ ಹಂಚಿಕೆಯಲ್ಲಿ ಧಾರವಾಡಕ್ಕೆ ತಾರತಮ್ಯ ಆಗುತ್ತಿದೆ . ಅಭಿವೃದ್ಧಿಗೆ ಅಗತ್ಯ ಅನುದಾನ ಸಿಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಧಾರವಾಡ ಸೌಕರ್ಯಗಳನ್ನು ಹೊಂದಲು ಸಾಧ್ಯವಾಗುತ್ತಿಲ್ಲ ಈ ಕಾರಣದಿಂದ ಜನರು ಪ್ರತ್ಯೇಕ ಪಾಲಿಕೆ ಬಯಸುತ್ತಿದ್ದಾರೆ . ಈ ದಿಸೆಯಲ್ಲಿ ಈಗಾಗಲೇ ಅನೇಕ ಹೋರಾಟಗಳು ಆರಂಭವಾಗಿವೆ . ತಾವು ಕೂಡ ಪ್ರತ್ಯೇಕ ಪಾಲಿಕೆ ಬೇಕು ಎಂಬ ಬೇಡಿಕೆಯ ಪರವಾಗಿದ್ದು , ಇದು ನ್ಯಾಯಸಮ್ಮತ ಕೂಡ ಎಂದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

