ಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ , ಕಾಲೇಜುಗಳಿಗೆ ಇಂದು ಮೇ . 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ .
ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ . ಇಂದು ಮೇ . 20 ರಂದು ಜಿಲ್ಲೆಯ ಎಲ್ಲಾ ಶಾಲೆ , ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ . ನಿನ್ನೆ ಮೇ .19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ . ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

