Breaking News

ಏ ವರುಣ ಬಾರದೆ ನಿನಗೆ ಕರುಣೆ : ಮಳೆಯ ಅಬ್ಬರಕ್ಕೆ ಜನಜೀವನ ತತ್ತರ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ . ಮಳೆಯ ಅಬ್ಬರಕ್ಕೆ ರಾಜ್ಯವೇ ಅಕ್ಷರಶಃ ಆಂತಕದ ಸ್ಥಿತಿಯಲ್ಲಿದೆ.

ಜಿಲ್ಲೆಯಲ್ಲಿ ಈಗಾಗಲೇ ಪ್ರವಾಹದ ಭೀತಿಯಲ್ಲಿರುವ ಜನರಿಗೆ ವರುಣನ ಅಬ್ಬರ ನಿಜಕ್ಕೂ ಮತ್ತೊಂದು ಚಿಂತೆಯನ್ನು ತಂದೊಡ್ಡಿದ್ದಾನೆ .

ಈಗಾಗಲೇ ಜಿಲ್ಲೆಯಾದ್ಯಂತ ಬಹುತೇಕ ಕಡೆಯಲ್ಲಿ ಕೆರೆ ಭರ್ತಿಯಾಗಿ ಕೋಡಿ ಹರಿದು , ಹೊಲ , ಮನೆಗಳಿಗೆ ನೀರು ನುಗ್ಗುತ್ತಿದೆ . ಮೊನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಮಳೆಯಿಂದ ಹೊಲಗಳಲ್ಲಿನ ನೀರು ಮನೆಗಳಿಗೆ ನುಗ್ಗಿ ಹಾನಿ ಮಾಡುತ್ತಿದೆ.

ಇನ್ನೂ ಜಿಲ್ಲೆಯ ಹಲವು ಗ್ರಾಮದಲ್ಲಿ ಹಲವಾರು ಮನೆಗಳ ಕುಸಿದಿದ್ದು ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ

ಅಲ್ಲದೇ ವಾಣಿಜ್ಯನಗರಿಯಲ್ಲಿಯೂ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ . ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಪರಿಣಾಮ ಗಣೇಶನಗರದ ಜನರು ಪರದಾಡುವಂತಾಗಿದೆ ರಾತ್ರಿ ಪೂರ್ತಿ ನಿದ್ದೆ ಮಾಡದೇ ನೀರನ್ನು ಹೊರ ಚೆಲ್ಲುವುದೇ ಒಂದು ಕೆಲಸವಾಗಿದೆ.

ಹುಬ್ಬಳ್ಳಿಯ ವಿದ್ಯಾನಗರಲ್ಲಿಯೂ ಮಳೆ ಅವಾಂತರ ಸೃಷ್ಟಿಸಿದ್ದು , ನೂರಾರು ಮನೆಗಳಿಗೆ ನೀರು ನುಗ್ಗಿದ್ದು , ರಾತ್ರಿಯಿಡೀ ನಿದ್ದೆ ಮಾಡದೆ ನೀರನ್ನು ಹೊರ ಹಾಕುವಂತಾಗಿದ್ದು ಜನರು ಮತ್ತೊಮ್ಮೆ ಪ್ರವಾಹದ ಭೀತಿಯಲ್ಲಿಯೇ ಜೀವನ ನಡೆಸುವಂತಾಗಿದೆ

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *