ಧಾರವಾಡ : ನವಲಗುಂದ ಪಟ್ಟಣದ ಹೊರವಲಯದಲ್ಲಿರುವ ಇಬ್ರಾಹಿಂಪುರ ರಸ್ತೆಯ ಪುರಸಭೆಯ ಕಸ ಸಂಗ್ರಹ ಕೇಂದ್ರದಲ್ಲಿ ಕೆಲಸಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು , ಮೃತ ಪಟ್ಟಿದ್ದಾನೆ ಎನ್ನಲಾಗಿದೆ .
ಟೆಂಡರ್ ಬೇಸ್ ನಲ್ಲಿ ಪುರಸಭೆಯ ಕಸ ಸಂಗ್ರಹ ಕೇಂದ್ರದಲ್ಲಿ ಕೆಲಸಮಾಡುತ್ತಿದ್ದ ವ್ಯಕ್ತಿ ಇಂದು ಮಧ್ಯಾಹ್ನ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು ಸ್ಥಳಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ .
ಇನ್ನು ಮೃತ ದುರ್ದೈವಿಯನ್ನು 40 ವರ್ಷ ವಯಸ್ಸಿನ ಗೂಡುಸಾಬ ಮಾಬುಸಾಬ ಶಿರೂರು ಎಂದು ತಿಳಿದು ಬಂದಿದೆ . ಘಟನೆ ನವಲಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

