Breaking News

ಭೀಕರ ಅಪಘಾತ : ಕಾಂಗ್ರೆಸ್ ಮುಖಂಡ ಸಾವು


ಸಿದ್ದಾಪುರ (ಉತ್ತರ ಕನ್ನಡ): ಭೀಕರ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ.

ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಇದು ಎದುರುಗಡೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *