ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದ್ದು , ಕೊನೆಗೂ ಕುತೂಹಲಕ್ಕೆ ತೆರೆಬಿದ್ದಿದ್ದೆ . ವಿಶೇಷವೆಂದರೆ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯ ನಾಯಕ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿದೆ .
ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಧಾರವಾಡದ ಲಿಂಗರಾಜ್ ಪಾಟೀಲ್ , ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ . ಮಂಜುಳಾ , ದಲಿತ ಕೋಟಾದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಒಬಿಸಿ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್ ನೀಡಿದೆ . ಈ ಮೂಲಕ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯೇಂದ್ರ ಅವರ ಆಸೆಗೆ ಹೈಕಮಾಂಡ್ ತಣ್ಣೀರೆರಚಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

