ಬೆಂಗಳೂರು: ‘ನಾಡಗೀತೆ ಮತ್ತು ಕುವೆಂಪು ಅವರನ್ನು ಅಪಮಾನಿಸಿದ ವ್ಯಕ್ತಿಯನ್ನು ಮೊದಲು ಒದ್ದು ಒಳಗೆ ಹಾಕಬೇಕು’ ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೆಸರು ಹೇಳದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಡಗೀತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ ಅಪಮಾನ ಮಾಡಿದರೆ ಸುಮ್ಮನಿರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





