Breaking News

3 ಪಕ್ಷಗಳಿಂದ : 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್‌ 3 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌,ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಆಡಳಿತ ಪಕ್ಷ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್‌ ಹಾಗೂ ಹೇಮಲತಾ ನಾಯಕ್‌ ಅವರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಅಬ್ದುಲ್‌ ಜಬ್ಟಾರ್‌ ಹಾಗೂ ನಾಗರಾಜ ಯಾದವ್‌ ಅವರು ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ನಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಟಿ.ಎ. ಶರವಣ ನಾಮಪತ್ರ ಸಲ್ಲಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *