ಧಾರವಾಡ : ಕರ್ನಾಟಕ ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಗೆ ಇಂದು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪಕ್ಷದ ಮುಖಂಡರ ಜೊತೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಮೊದಲೂ ವೇದಿಕೆ ಧಾರವಾಡ ಕಲಾಭವನ ಮೈದಾನದಲ್ಲಿ ಪಕ್ಷದ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಧಾರವಾಡ ಡಿಸಿ ಕಚೇರಿಯಲ್ಲಿ ಬಸವರಾಜ್ ಹೊರಟ್ಟಿ ನಾಮಿನೇಷನ್ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಮ್ ಹೆಬ್ಬಾರ, ಸಿ ಸಿ ಪಾಟೀಲ, ಹಾಲಪ್ಪಾ ಆಚಾರ, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕರಾದ ಬೆಲ್ಲದ್, ಸಿ ಎಂ ನಿಂಬಣ್ಣವರ, ಅಮೃತ ದೇಸಾಯಿ ಸೇರಿ ಹಲವು ಸೇರಿ ಹಲವು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

