Breaking News

ಸೋಲಿನ ಭಯ ನನಗಿಲ್ಲ: ಹೊರಟ್ಟಿ

ಧಾರವಾಡ: ಸೋಲಿನ ಭಯ ನನಗಿಲ್ಲ. ನಾನು ಈ ಹಿಂದೆ ಅನೇಕ ಪಕ್ಷಗಳಿಂದ ಚುನಾಯಿತನಾಗಿ ಬಂದಿದ್ದೇನೆ. ನನ್ನನ್ನು ಚುನಾಯಿತಗೊಳಿಸಿದವರು ಶಿಕ್ಷಕರು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ವಿರೋಧ ಪಕ್ಷದವರು ನಮಗೇ ಮತ ಹಾಕಿ ಎಂದು ಹೇಳುವುದಿಲ್ಲ. ಏನಾದರೂ ಮಾತನಾಡಬೇಕು ಎಂಬ ಉದ್ದೇಶದಿಂದ ಸೋಲಿನ ಭಯದಿಂದ ಹೊರಟ್ಟಿ ಬಿಜೆಪಿಗೆ ಹೋಗಿದ್ದಾರೆ ಎಂಬ ಹೇಳಿಕೆ ಕೊಟ್ಟಿದ್ದಾರೆ. ಇವರ ಹೇಳಿಕೆಗೆ ಜೂ.15ನೇ ತಾರೀಖಿಗೆ ಉತ್ತರ ಸಿಗುತ್ತದೆ ಎಂದರು.

ಬಿಜೆಪಿ ಇನ್ನೂ ಹಲವರು ಬರುತ್ತಾರೆ ಎಂಬ ವಿಷಯ ಗೊತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರು, ಬಿಜೆಪಿಗೆ ಇನ್ನೂ ಹಲವರು ಬರುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರೆ ಅದು ಅಧಿಕೃತ ವ್ಯಕ್ತಿ ಹೇಳಿದಂತೆ ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *