Breaking News

ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಡಿಕೆಶಿ


ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಟ್ವೀಟ್ ಮೂಲಕ ಈ ಬಗ್ಗೆ ಅವರು ಆರೋಪಿಸಿದ್ದು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *