Breaking News

ಕಾಲೇಜಿಗೆ ಸೇರಲು ಹೊರಟ್ಟಿದ ಹುಡುಗಿ ಸ್ಮಶಾನ ಸೇರಿದಳು : ವಿಧಿ ಆಟ


ಬೆಂಗಳೂರು: ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು.

ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬನಶಂಕರಿಯ ಕಿತ್ತೂರು ರಾಣಿ ಚೆನ್ನಮ್ಮ ಫ್ಲೈ ಓವರ್ ಬಳಿ ವೇಗವಾಗಿ ಬಂದ ಡೆಲ್ಲಿ ಪಬ್ಲಿಕ್ ಶಾಲೆಯ ವ್ಯಾನ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಹರ್ಷಿತಾ ಮತ್ತು ದರ್ಶನ್ ಗಾಯಗೊಂಡಿದ್ದಾರೆ. ಶಾಲಾ ವಾಹನ ಚಾಲಕ ಪರಾರಿಯಾಗಿದ್ದಾನೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *