ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ವಾಹನ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕಿ ಸಾವನ್ನಪ್ಪಿದ್ದಾಳೆ . ಈ ಮೂಲಕ ಸಾವಿನ ಸಂಖ್ಯೆ 11 ಕ್ಕೇರಿದೆ ಐದು ವರ್ಷದ ಆರಾಧ್ಯ ಹುತಮಲ್ಲನ್ನವರ ಮೃತಪಟ್ಟ ಬಾಲಕಿ . ಕಳೆದ 6 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತುಮೇ 20 ರಂದು ಬಾಡ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿ , ಹಲವರು ಗಂಭೀರವಾಗಿ ಗಾಯಗೊಂಡಿದ್ದರುಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸ್ ಬರುವಾಗ ಚಾಲಕನ ಅಜಾರೂಗಕತೆಯಿಂದ ವಾಹನ ಮರಕ್ಕೆ ಡಿಕ್ಕಿ ಹೊಡೆದಿತ್ತು ಪರಿಣಾಮ , ಸ್ಥಳದಲ್ಲೇ ಏಳು ಜನ ಹಾಗೂ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

