ಬೆಂಗಳೂರು: ನಾನು ಹುಟ್ಟಿದ್ದು ಇತ್ತೀಚೆಗೆ. ನನಗೆ 60 ವರ್ಷ. ಸಿದ್ದರಾಮಯ್ಯನವರು ಹಿರಿಯರಿದ್ದಾರೆ. ಆರ್ಯ ದ್ರಾವಿಡ ವಿಚಾರಗಳ ಬಗ್ಗೆ ಪುಸ್ತಕಗಳನ್ನು ಓದಿಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ಅವರಿಗೆ ಆರ್ಯ ದ್ರಾವಿಡ ವಿಚಾರವಾಗಿ ಪ್ರಶ್ನೆ ಕೇಳಲಾಯಿತು. ಅದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘ಸಿದ್ದರಾಮಯ್ಯ ನವರು ಹಿರಿಯರಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಿದ್ದಾರೆ. ನಾನು ಇದರ ಬಗ್ಗೆ ಹೆಚ್ಚು ಅಧ್ಯಯನ ಮಾಡಿಲ್ಲ. ನಾನು ಹುಟ್ಟಿದ್ದು ಇತ್ತಿಚೆಗೆ. ನನಗೆ 60 ವರ್ಷ. ಸಿದ್ದರಾಮಯ್ಯ ನವರು ಹಿರಿಯರಿದ್ದಾರೆ. ಈ ಬಗ್ಗೆ ನಾನು ಪುಸ್ತಕ ಎಲ್ಲಾ ಓದಿಕೊಂಡು ಹೇಳ್ತಿನಿ’ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

