ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯವಾಗಿದ್ದು , ಸೂಕ್ತ ಭದ್ರತೆ ನೀಡುವುದರಲ್ಲಿ ವಿಫಲವಾದ ರಾಜ್ಯ ಸರ್ಕಾರವೇ ಘಟನೆಗೆ ಕಾರಣ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ .
ರಾಷ್ಟ್ರಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ರವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸೂಕ್ತ ಭದ್ರತೆ ಒದಗಿಸಬೇಕಿತ್ತು . ಆದರೆ ರಾಜ್ಯ ಸರ್ಕಾರ ತೋರಿದ ನಿರ್ಲಕ್ಷದಿಂದಾಗಿ ಅಹಿತಕರ ಘಟನೆ ನಡೆದಿದೆ . ಸರ್ಕಾರ ತನಿಖೆ ಮಾಡಬೇಕು ಎಂದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

