ಬೆಂಗಳೂರು: ಕಳೆದೊಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ.
ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಾಲ್ಕನೇ ಭೀತಿ ಎದುರಾಗಿದೆ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ 1443 ಸೋಂಕಿತರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ನಾಲ್ಕನೇ ಭೀತಿ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ತಜ್ಞರು ಎಚ್ಚರಿಕೆ ನೀಡಿದ್ದು, ಕೋವಿಡ್ ಲಸಿಕೆ ಪಡೆದಿದ್ದರೂ ಜನರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

