Breaking News

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸಂಚಾರಿ ಆಸ್ಪತ್ರೆಯನ್ನು ಆರಂಭಿಸಲಾಗಿದ್ದು, ಶೀಘ್ರವೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೊಡ ಮಾಡಿರುವ ಸಂಚಾರಿ ಪ್ರಯೋಗಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಆಸ್ಪತ್ರೆಯನ್ನು ಆರಂಭಿಸಲಾಗುವುದು. ಪ್ರಯೋಗ ಯಶಸ್ವಿಯಾದರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *