Breaking News

ಹಿರಿಯ ಕಾಂಗ್ರೆಸ್ ನಾಯಕ ಸಾಧು ಸಿಂಗ್ ಬಂಧನ


ಅಮೃತಸರ – ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಬಂಧಿಸಲಾಗಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಕಾಂಗ್ರೇಸ್ ಸರ್ಕಾರದ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಮುಂಜಾನೆ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ.

ಇವರೊಂದಿಗೆ ಇವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವರನ್ನೂ ವಶಕ್ಕೆಪಡೆಯಲಾಗಿದೆ.
ಕಾಂಗ್ರೆಸ್ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾನ್ ಎಚ್ಚರಿಕೆ ನೀಡಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.ಬಂಧನವಿವರಗಳನ್ನು ಖಚಿತಪಡಿಸಿದ. ವಿಜಿಲೆನ್ಸ್ ಬ್ಯೂರೋ ಅಧಿಕಾರಿಯೊಬ್ಬರು, ಇಬ್ಬರನ್ನು ಭ್ರಷ್ಟಾಚಾರದ ಆರೋಪದಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ ಕಳೆದ ವಾರ ವಿಭಾಗೀಯ ಅರಣ್ಯ ಅಕಾರಿ ಗುನರ್‍ ಮ್ಪ್ರೀತ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಹುಮ್ಮಿ ಅವರನ್ನು ಬಂಧಿಸಿ ಮಾಜಿ ಸಚಿವರ ವಿರುದ್ಧ ಅನೇಕ ಪುರಾವೆಗಳನ್ನು ಸಂಗ್ರಹಿಸಿತ್ತು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *