ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಹೇಬ್ರು ನೋಡಬೇಕು’ ಎಂದು ಅವರು ತಿರುಗೇಟು ನೀಡಿದ್ದಾರೆ. ‘ಕರ್ನಾಟಕದಲ್ಲಿ ಬಿಜೆಪಿ ಸಂಘಟನೆ ಆಗೋದಕ್ಕೆ ಬಿಎಸ್ ಯಡಿಯೂರಪ್ಪರ ಪ್ರಾಮಾಣಿಕ ಪ್ರಯತ್ನ ಇದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಿಂದ ಕೆಳಗೆ ಇಳಿಸಿದರು. ಲಿಂಗಾಯತ ಸಮಾಜ ಬಿಎಸ್ ವೈ ಇದೆ ಎಂದು ಪ್ರಚಾರ ಮಾಡಿದರು. ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ. ಅವರನ್ನು ಪಕ್ಷದಿಂದ ಹೊರಗೆ ಇಟ್ಟರು. ಅವರ ಮಗನಿಗೆ ಎಂಎಲ್ ಸಿ ಟಿಕೆಟ್ ಕೂಡ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

