ಬೆಂಗಳೂರು: “ನನ್ನ ಕೋವಿಡ್ RT-PCR ವರದಿ ನೆಗೆಟಿವ್ ಬಂದಿದ್ದು, ನಾನು ಇಂದಿನಿಂದ ಮೊದಲಿನಂತೆ ಸಕ್ರಿಯವಾಗಿ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆಗಳಿಗೆ ನಾನು ಚಿರಋಣಿ,” ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕಳೆದ ಐದು ದಿನಗಳ ಹಿಂದೆಯಷ್ಟೇ ಅವರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿತ್ತು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ಅವರು, ಇಂದು ನೆಗೆಟಿವ್ ವರದಿ ಬಂದಿರುವ ಬಗ್ಗೆಯೂ ಟ್ವೀಟ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

