ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 458 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 208 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,70,531 ಮಂದಿ ಬಿಡುಗಡೆ ಆಗಿದ್ದಾರೆ. ಅದರಂತೆ ರಾಜ್ಯದಲ್ಲಿ ನಿನ್ನೆ ಒಂದೇ ದಿನ 21,927 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 471 ಜನರಲ್ಲಿ ಸೋಂಕು ದೃಢಪಟ್ಟಿದೆ.
214 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 39,11,796 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಮೃತಪಟ್ಟ ಸೋಂಕಿತರ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,880 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 2.14 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ.1.73 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

