Breaking News

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೇದೆ


ಗದಗ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯವಕನನ್ನು ಸಂಚಾರಿ ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ನಗರದ ಐತಿಹಾಸಿಕ ಭೀಷ್ಮ‌ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್ ಪೊಲೀಸ್ ಪೇದೆ ಮತ್ತು ಸ್ಥಳೀಯರು ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ರಂಗನವಾಡಿ ಓಣಿಯ ಮುಬಾರಕ್, ನೋಡು ನೋಡುತ್ತಿದ್ದಂತ ಕೆರೆಗೆ ಹಾರಿದ್ದಾನೆ. ಈ ವೇಳೆ ಯುವಕನನ್ನು ನೋಡಿ ಬೆಚ್ಚಿಬಿದ್ದಿದ್ದ ಪೇದೆ ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಥಳೀಯ ಯುವಕನ ಸಹಾಯದಿಂದ ಯುವನನ್ನು ರಕ್ಷಿಸಿ ಮಾನವೀಯತೆಯ ಮೆರೆದಿದ್ದಾರೆ. ಸಂಚಾರಿ ಠಾಣೆಯ ಪೇದೆ ಗಂಗಾಧರ ಪೂಜಾರ, ಮತ್ತು ಸ್ಥಳೀಯ ಮಹೇಶ ವಡ್ಡರರ ರಕ್ಷಣೆ ಕಾರ್ಯ ಕೈಗೊಂಡರು. ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *