ಕಲಬುರಗಿ:ಮೂವತ್ತು ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ನಗರದ ಬ್ರಹ್ಮಪುರ ಪೋಲಿಸ್ ಠಾಣೆಯ ಕಾನಸ್ಟೇಬಲ್ ಭೀಮಾ ನಾಯಕ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಅಬ್ದುಲ್ ಮುಸ್ತಫಾ ಎಂಬುವವರು ಎಸಿಬಿಗೆ ದೂರು ನೀಡಿದ್ದು, ಭೀಮಾ ನಾಯಕ್ ಸೈಟ್ ವ್ಯವಹಾರದ ಸೆಟಲ್ಮೆಂಟ್ ಮಾಡಿದ್ದ ಎಂಬುದು ಬೆಳಕಿಗೆ ಬಂದಿದೆ.
ಅಬ್ದುಲ್ ಅಜೀಜ್ ಮುಸ್ತಫಾ ಎಂಬುವವನ ವಿರುದ್ಧ ಸೈಟ್ ವಿಚಾರವಾಗಿ ಕೆಲವರು ದೂರು ನೀಡಿದ್ದು, ಠಾಣೆಗೆ ಕರೆಯಿಸಿ ಸಮಸ್ಯೆ ಇತ್ಯರ್ಥ ಮಾಡಿದ್ದನು. ವ್ಯವಹಾರ ಸೆಟಲ್ಮೆಂಟ್ ಮಾಡಿದ್ದಕ್ಕಾಗಿ ಒಂದು ಲಕ್ಷ ಹಣ ನೀಡುವಂತೆ ಭೀಮಾ ನಾಯಕ ಡಿಮ್ಯಾಂಡ್ ಇಟ್ಟಿದ್ದನಂತೆ. ಇದೇ ವಿಷಯವಾಗಿ ನಿನ್ನೆ ರಾತ್ರಿ 30 ಸಾವಿರ ಹಣ ಪಡೆಯುವಾಗ ಕಲಬುರಗಿ ನಗರದ ರೈಲ್ವೆ ನಿಲ್ದಾಣದ ಬಳಿ ರೆಡ್ ಹ್ಯಾಂಡ್ ಆಗಿ ಎಸಿಬಿಗೆ ಸಿಕ್ಕಿ ಬಿದ್ದಿದ್ದಾನೆ. ಇದೀಗ ಕಾನ್ಸ್ಟೇಬಲ್ ಭೀಮಾ ನಾಯಕ್ನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

