Breaking News

ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಪ್ರಧಾನಿ


ಗುಜರಾತ್‌: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.  ಮೋದಿ ಗುಜರಾತ್‌ನ ಸಿಎಂ ಆಗಿದ್ದಾಗ ಜಾರಿಗೊಳಿಸಿದ ಯೋಜನೆಗಳಾದ ಆಯುಷ್ಮಾನ್ ಭಾರತ್ ಯೋಜನೆ, ಮಿಷನ್ ಇಂದ್ರಧನುಷ್ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (ಪಿಎಂಎಂವಿವೈ) ನಂತಹ ಆರೋಗ್ಯ ರಕ್ಷಣೆ ಯೋಜನೆಗಳ ಮಾದರಿಯಲ್ಲೇ ದೇಶಾದ್ಯಂತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಪ್ರಧಾನಿ ಮೋದಿ ಗುಜರಾತ್‌ನ ನವಸಾರಿಗೆ ಭೇಟಿ ನೀಡಿ ಸುಮಾರು 3050 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಕೈಗೊಂಡ ಆರೋಗ್ಯ ರಕ್ಷಣೆಯ ಉಪಕ್ರಮಗಳ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿ, ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗಳು ಸಮಾಜದ ದುರ್ಬಲ ವರ್ಗಗಳಿಗೆ ಹೇಗೆ ಪ್ರಯೋಜನವನ್ನು ನೀಡಿತು ಎಂಬುದನ್ನು ವಿವರಿಸಿದರು. ʻಗುಜರಾತ್‌ನಲ್ಲಿ ಆರೋಗ್ಯ ಮೂಲಸೌಕರ್ಯ ಸುಧಾರಿಸಿದೆ ಮತ್ತು ಆರೋಗ್ಯ ಸೂಚಕಗಳು ಸ್ಥಿರವಾಗಿ ಸುಧಾರಿಸುತ್ತಿವೆ. ಮೂರನೇ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕದಲ್ಲಿ, ಗುಜರಾತ್ ದೇಶದ ಅಗ್ರಸ್ಥಾನದಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಬಡವರ ಆರೋಗ್ಯಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದೆವು. ಆ ಅನುಭವಗಳು ಈಗ ದೇಶಾದ್ಯಂತ ಬಡವರಿಗೆ ಪ್ರಯೋಜನವನ್ನು ನೀಡುತ್ತಿವೆʼ ಎಂದು ಹೇಳಿದರು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *