ಬೆಂಗಳೂರು: ಸ್ಯಾಟ್ಲೈಟ್ ಟೌನ್ ರಿಂಗ್ ರೋಡ್ ಪ್ರಧಾನಮಂತ್ರಿಗಳು ಜೂನ್ 21 ರಂದು ಅಡಿಗಲ್ಲು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿನಗರ ಆರ್ಚ್ ಬಳಿ ಗ್ರೇಡ್ ಸಪರೇಟರ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಹೊಸಕೇರಹಳ್ಳಿ ಮತ್ತು ಕೆಂಚೇನಹಳ್ಳಿ ಕೆರೆಗಳಲ್ಲಿ ಒಳಚರಂಡಿ ತ್ಯಾಜ್ಯ ನೀರನ್ನು ತಿರುಗಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.