Breaking News

ವಿಧಾ​ನ​ಸಭಾ ಚುನಾ​ವ​ಣೆ​ಯಲ್ಲಿ ವಿಜ​ಯೇಂದ್ರ ಸ್ಪರ್ಧಿ​ಸು​ವುದು ಖಚಿತ : ಯಡಿ​ಯೂ​ರಪ್ಪ


ತುಮ​ಕೂ​ರು: ಮುಂಬ​ರುವ ವಿಧಾ​ನ​ಸಭಾ ಚುನಾ​ವ​ಣೆ​ಯಲ್ಲಿ ವಿಜ​ಯೇಂದ್ರ ಸ್ಪರ್ಧಿ​ಸು​ವುದು ಖಚಿತ. ಆದರೆ ಕ್ಷೇತ್ರ ಯಾವು​ದೆಂದು ನಿರ್ಧಾ​ರ​ವಾ​ಗಿಲ್ಲ ಎಂದು ಮಾಜಿ ಮುಖ್ಯ​ಮಂತ್ರಿ ಬಿ.ಎಸ್‌.ಯಡಿ​ಯೂ​ರಪ್ಪ ತಿಳಿ​ಸಿ​ದ್ದಾರೆ.

ಅವರು ತುಮ​ಕೂ​ರಿ​ನಲ್ಲಿ ಸುದ್ದಿ​ಗಾ​ರ​ರೊಂದಿಗೆ ಮಾತ​ನಾಡಿ ಗುಬ್ಬಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬು​ದರ ಬಗ್ಗೆ ಖಚಿ​ತತೆ ಇಲ್ಲ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಪ್ರಾರಂಭವಾಗಿದ್ದು ಮುಂಬರುವ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬುದು ನಮ್ಮ ದೃಷ್ಟಿ. ಆ ದೃಷ್ಟಿಯಿಂದ ರಾಜ್ಯಪ್ರವಾಸ ಪ್ರಾರಂಭವಾಗಿದೆ ಎಂದರು. ವಾರಕ್ಕೊಂದು ಜಿಲ್ಲೆಗೆ ತೆರಳಿ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ಮಾಡುವುದಾಗಿ ತಿಳಿ​ಸಿದ ಅವರು ಎಲ್ಲಾ ವರ್ಗದ ಜನರನ್ನು ನಮ್ಮ ಜೊತೆಗೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದ​ರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *