ಬೆಂಗಳೂರು: ರಾಜ್ಯದಲ್ಲಿ ಸತತ ಮೂರು ದಿನಗಳ ಬಳಿಕ ಕೊರೋನಾ ಸೋಂಕು ಹೊಸ ಪ್ರಕರಣಗಳು ಕೊಂಚ ಇಳಿಕೆಯಾಗಿದ್ದು, ಶುಕ್ರವಾರ 634 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ, ಒಂದೂವರೆ ತಿಂಗಳ (47 ದಿನ) ಬಳಿಕ ಸೋಂಕಿತರ ಸಾವು 2ಕ್ಕೆ ಹೆಚ್ಚಳವಾಗಿದೆ.
ರಾಜ್ಯದಲ್ಲೀಗ 4528 ಸಕ್ರಿಯ ಸೋಂಕಿತರಿದ್ದಾರೆ. ಆದರೆ, ಅವರ ಪೈಕಿ 32 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಉಳಿದಂತೆ 4496 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ 503 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 23 ವರ್ಷದ ಯುವಕ, ಬೆಂಗಳೂರಿನಲ್ಲಿ 83 ವರ್ಷದ ವೃದ್ಧೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 22,586 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 2.8ರಷ್ಟು ದಾಖಲಾಗಿದೆ. ಗುರುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳನ್ನು 1500 ಕಡಿಮೆ ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು ಕೂಡಾ 199 ಇಳಿಕೆಯಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





