ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೂಡಲೇ ಅಗ್ನಿಪಥ ಯೋಜನೆಯನ್ನು ಸ್ಥಗಿತಗೊಳಿಸಿ ಪ್ರತಿಭಟನಾಕಾರರೊಂದಿಗೆ ಮಾತನಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಅಗ್ನಿಪಥ್ ಯೋಜನೆಗೆ ನಮ್ಮ ವಿರೋಧವಿದೆ. ನಾಲ್ಕು ವರ್ಷದ ಬಳಿಕ ಆಯ್ಕೆ ಆದ ಅಭ್ಯರ್ಥಿಗಳ ಪರಿಸ್ಥಿತಿ ಏನು? ಯಾರೂ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಬಾರದು. ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ಅದನ್ನು ಬಿಟ್ಟು ಹಿಂಸಾತ್ಮಕ ಕೃತ್ಯಕ್ಕೆ ಮುಂದಾಗಬಾರದು. ಪ್ರತಿಭಟನಾಕಾರರ ಜೊತೆ ಸರ್ಕಾರ ಮಾತನಾಡಬೇಕು. ಕೂಡಲೇ ಸರ್ಕಾರ ಅಗ್ನಿಪಥ್ ಯೋಜನೆಯ ನೇಮಕಾತಿ ಸ್ಥಗಿತಗೊಳಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಜಾತಿ ನಿಂದನೆ ಪ್ರಕರಣ ದಾಖಲು ವಿಚಾರವಾಗಿ ಮಾತನಾಡಿದ ಅವರು, ಇದು ಬಿಜೆಪಿ ಹುನ್ನಾರ ಛಲವಾದಿ ನಾರಾಯಣಸ್ವಾಮಿ ಮಾಡಿಲ್ಲ ಬಿಜೆಪಿಯವರು ಅವರ ಕೈಯಿಂದ ಮಾಡಿಸಿದ್ದಾರೆ. ನಾನು ಜಾತಿ ನಿಂದನೆ ಮಾಡಿಯೇ ಇಲ್ಲ ಆದರೆ ಬಿಜೆಪಿಯವರು ಹಳೇ ಚಡ್ಡಿ ಅವರ ಮೇಲೆ ಹೊರಿಸಿದ್ದಾರೆ ಹಾಗಾದ್ರೆ ಇದು ಏನು? ನಾನು ಲಾಯರ್ ಇದೀನಿ ನನಗೆ ಎಲ್ಲಾ ಗೊತ್ತು. ಇದು ಆರ್ ಎಸ್ ಎಸ್ ಹಾಗೂ ಬಿಜೆಪಿಯವರ ಹುನ್ನಾರ ಎಂದರು.
ಯುಪಿ ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿ ಇದು ಕಣ್ಣೊರೆಸುವ ತಂತ್ರ ಅಷ್ಟೇ ಎಂದು ಕೇಂದ್ರ ಸರ್ಕಾರದ ಕುರಿತು ವ್ಯಂಗ್ಯವಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





