Breaking News

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿ ಆತ್ಮಹತ್ಯೆ


ಕುಮಟಾ : ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಲನಗದ್ದೆ ಎಂಬಲ್ಲಿ ನಡೆದಿದೆ.

ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ (18) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದು, ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ. ತಂದೆ ಆಟೋ ಚಾಲಕನಾಗಿದ್ದು, ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *