ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುಸ್ತಕ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ತಿರುಗೇಟು ನೀಡಿರುವ ಸಚಿವ ಆರ್.ಅಶೋಕ್, ಪುಸ್ತಕ ಹರಿದರೆ ನ್ಯೂಸ್ ಆಗ್ತಿನಿ ಅಂತ ಹಾಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತುಮಕೂರಿನ ಮಾಯಸಂದ್ರದಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಡಿಕೆಶಿ ಹಿಂದೆ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದವರು. ಯಾರೋ ಕೊಟ್ಟ ಪುಸ್ತಕ ಓದಿ ಮಾತನಾಡುತ್ತಿದ್ದಾರೆ. ಮೊದಲು ಪುಸ್ತಕವನ್ನು ಸರಿಯಾಗಿ ಓದಲಿ. ಎರಡು ಸರ್ಕಾರದ ಅವಧಿಯ ಪುಸ್ತಕ ಓದಿ ಮಾತನಾಡಲಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





