ಮೈಸೂರು: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನ್ವಯ ಕನ್ನಡ, ತಮಿಳು, ತೆಲುಗು ಮೊದಲಾದ ಪ್ರಾದೇಶಿಕ ಭಾಷೆಗಳೊಂದಿಗೆ ಸಂಸ್ಕೃತಕ್ಕೂ ಉತ್ತೇಜನ ನೀಡಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿರುವ ಸುತ್ತೂರು ಮಠದ ಆವರಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠದಿಂದ ನಿರ್ಮಿಸಿರುವ ಕೆಎಸ್ಎಸ್ (ಕ್ಯಾತನಹಳ್ಳಿ ಸಾಹುಕಾರ್ ಸಿದ್ದಲಿಂಗಯ್ಯ) ಸಂಸ್ಕೃತ ಪಾಠಶಾಲೆ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇಂಗ್ಲಿಷ್ನಲ್ಲಿ ವ್ಯಾಖ್ಯಾನಿಸಿರುವ ‘ಪತಂಜಿಲಿ ಯೋಗ ಸೂತ್ರಾಸ್’, ‘ಶಿವ ಸೂತ್ರಾಸ್’ ಹಾಗೂ ‘ನಾರದ ಭಕ್ತಿ ಸೂತ್ರಾಸ್’ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





