ದಾವಣಗೆರೆ : ಚಾಕುವಿನಿಂದ ಚುಚ್ಚಿ ಖಾಸಗಿ ಬಸ್ ಏಜೆಂಟರನ್ನ ಕೊಚ್ಚಿ ಬರ್ಬರವಾಗಿ ಹತ್ಯೆಯಾದ ಘಟನೆ ದಾವಣಗೆರೆ ಜಿ. ಚನ್ನಗಿರಿ ಪಟ್ಟಣದ ಕೈ ಮರದಲ್ಲಿ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಏಜೆಂಟ್ ಹತ್ಯೆಗೀಡಾದ ಯುವಕ.ಜಾಕೀರ್ ಆಗಮಿಸುತ್ತಿದ್ದಂತೆ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬನಿಂದ ಏಕಾಏಕಿಯಾಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಮನ ಬಂದಂತೆ ವ್ಯಕ್ತಿ ಚುಚ್ಚಿದ್ದಾನೆ. ರಕ್ತಸಿಕ್ತವಾಗಿ ಬಿದ್ದಿದ್ದರೂ ಚುಚ್ಚಿ ಚುಚ್ಚಿ ಯುವಕನನ್ನು ಕೊಲೆ ಮಾಡಿದ ಕೊಲೆಗಡುಕ .
ಕೊಲೆ ಮಾಡುತ್ತಿದ್ದರು ಜನರು ಮೂಕ ಪ್ರೇಕ್ಷಕರಾಗಿದ್ದರು.
ಅನೈತಿಕ ಸಂಬಂಧ ಅಥವಾ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಚನ್ನಗಿರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





