ಸಾಂಗ್ಲಿ: ಜಿಲ್ಲೆಯ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿಸಲ್ಪಟ್ಟವರು ಕುಟುಂಬಕ್ಕೆ ಸಾಲ ನೀಡಿದವರಾಗಿದ್ದಾರೆ.
ಮಣಿಕ್ ವಾನ್ಮೋರೆ ಮತ್ತು ಪೋಪರ್ ವಾನ್ಮೋರೆ ಸದಸ್ಯರು ತಮ್ಮ ಪತ್ನಿಯರು, ಮಕ್ಕಳು ಮತ್ತು ತಾಯಿಯೊಂದಿಗೆ ಸೋಮವಾರ ಮಹೈಸಲ್ ಪಟ್ಟಣದ ತಮ್ಮ ಮನೆಗಳಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಸಹೋದರರ ಮನೆಗಳು ಒಂದು ಕಿಮೀ ಅಂತರದಲ್ಲಿವೆ.
ಮಣಿಕ್ ಮನೆಯಲ್ಲಿ ಆರು ಮಂದಿ ಮೃತಪಟ್ಟಿದ್ದರೆ,ಮೂವರು ಪೋಪಟ್ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಒಂದು ಮನೆಯಲ್ಲಿ ಪತ್ತೆಯಾದ ಸುಸೈಡ್ ನೋಟ್ನಲ್ಲಿ ಸಾಲದ ಹೊರೆ ಹಾಗೂ ಸಾಲಗಾರರ ಉಪಟಳದಿಂದ ಈ ಕ್ರಮಕೈಗೊಂಡಿದ್ದಾಗಿ ಬರೆಯಲಾಗಿದೆ.
ಈ ಸೋದರರು ಸಾಲ ಪಡೆದುಕೊಂಡಿದ್ದ 25 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ 13 ಮಂದಿಯನ್ನು ಬಂಧಿಸಲಾಗಿದ್ದು ಇವರಲ್ಲಿ ಕೆಲವರು ಈಗಾಗಲೇ ಸಾಲ ಪಡೆದವರನ್ನು ಪೀಡಿಸಿದ ಕುರಿತಾದ ಪ್ರಕರಣಗಳಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





