ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಸೋಮವಾರದಂದು ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಪೂರ್ವನಿಯೋಜಿತ ಕಾರ್ಯಕ್ರಮದಂತೆ ಯಡಿಯೂರಪ್ಪನವರು ಲಂಡನ್ ಗೆ ತೆರಳಿದ್ದಾರೆ.
ಯಡಿಯೂರಪ್ಪನವರಿಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಕುಟುಂಬದ ಇತರೆ ಸದಸ್ಯರು ಸಾಥ್ ನೀಡಿದ್ದು, ಈ ತಿಂಗಳ ಅಂತ್ಯಕ್ಕೆ ಭಾರತಕ್ಕೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪನವರು ತಮ್ಮ ಲಂಡನ್ ಪ್ರವಾಸದ ವೇಳೆ ಥೇಮ್ಸ್ ನದಿ ದಡದಲ್ಲಿ ಸ್ಥಾಪಿಸಲಾಗಿರುವ ಬಸವೇಶ್ವರ ಪ್ರತಿಮೆ ವೀಕ್ಷಿಸಿ ಗೌರವ ಸಲ್ಲಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





