ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವ ಬಂಡಾಯ ಶಾಸಕರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. ಈ ಕ್ರಮವನ್ನು ಅಮರಾವತಿ ಸಂಸದೆ ನವನೀತ್ ರಾಣಾ ಟೀಕಿಸಿದ್ದಾರೆ.
ರಾಣಾ ಅವರು, ‘ಉದ್ಧವ್ ಠಾಕ್ರೆ ಸರ್ಕಾರ ತೊರೆದು, ತಮ್ಮದೇ ನಿರ್ಧಾರ ಕೈಗೊಂಡಿರುವ ಹಾಗೂ ಬಾಳಾ ಸಾಹೇಬರ ಚಿಂತನೆಗಳಿಗೆ ಬದ್ಧವಾಗಿರುವ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಅಮಿತ್ ಶಾ ಅವರಲ್ಲಿ ಮನವಿ ಮಾಡುತ್ತೇನೆ. ಉದ್ಧವ್ ಠಾಕ್ರೆ ಅವರ ಗೂಂಡಾಗಿರಿ ಕೊನೆಯಾಗಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ವಿನಂತಿಸುತ್ತೇನೆ’ ಎಂದು ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





