ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಯಿ ಸ್ಮಾರ್ಟ್ ಸಿಟಿ ಅನುದಾನದಡಿ ಮುಕ್ತಾಯಗೊಂಡ ವಿವಿಧ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದರು.

2.8 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರ, 31.40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ, ಬೀದಿ ದೀಪ, 1050 ಮನೆಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಕಾಮಗಾರಿ ಲೋಕಾರ್ಪಣೆ ಮಾಡಿದರು.
ಇನ್ನೂ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಥ್ ನೀಡಿದ್ದು,ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಬಸವರಾಜ ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





