ಬೆಂಗಳೂರು: ನಮ್ಮ ತಂದೆಯವರಿಗೆ ಇದು ಕೊನೆಯ ಚುನಾವಣೆಯಾಗಿದೆ. ವರುಣಾ ಕ್ಷೇತ್ರವನ್ನ ಬಿಟ್ಟು ಕೊಡಲು ಸಿದ್ಧನಿದ್ದೇನೆ. ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂಬುದಾಗಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಯಸ್ಸಿನ ಸಮಸ್ಯೆ ಕಾರಣ ಬದಾಮಿ ಕ್ಷೇತ್ರಕ್ಕೆ ಹೋಗಿ ಬರುವುದು ಕಷ್ಟವಾಗಲಿದೆ. ಹಾಗಾಗಿ ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರವನ್ನ ಆರಿಸಿಕೊಳ್ಳಲು ಆಸಕ್ತಿ ಹೊಂದಿದ್ದಾರೆ. ಆದರೆ, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಅಂತಿಮವಾಗಿಲ್ಲ. ಅವರಿಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆ ಸಂಪೂರ್ಣ ಅರಿವು ಇದೆ. ಅವರಿಗೆ ಯಾವ ಕ್ಷೇತ್ರ ಉತ್ತಮ ಅನ್ನೋದು ಚನ್ನಾಗಿ ಗೊತ್ತಿದೆ. ಈಗಾಗಲೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





