ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಪೀಣ್ಯ ಎಸ್ಆರ್ಎಸ್ ಸರ್ಕಲ್ ಬಳಿ ನಡೆದಿದೆ. ರವಿ ಮೃತ ದುರ್ದೈವಿ.
ಮೂರು ದಿನದ ಹಿಂದೆ ಎಸ್ಆರ್ಎಸ್ ಸರ್ಕಲ್ ಬಳಿ ಮೂವರು ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇದುತ್ತಿದ್ದರು. ಈ ಬಗ್ಗೆ ಪೀಣ್ಯ ಪೊಲೀಸರಿಗೆ ಮಾಹಿತಿ ಬಂದಿದ್ದು, ಬೀಟ್ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಪೊಲೀಸರನ್ನು ನೋಡಿ ಯುವಕರು ಕಾಲ್ಕಿತ್ತಿದ್ದಾರೆ.
ಈ ವೇಳೆ ರವಿ ಎನ್ನುವಾತ ಕಟ್ಟಡ ಹತ್ತಿದ್ದು, ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಇಂದು ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





