Breaking News

ಎಸ್ಕೇಪ್ ಆಗಲು ಹೋಗಿ ಸ್ಮಶಾನ ಸೇರಿದ


ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಪೀಣ್ಯ ಎಸ್​ಆರ್​ಎಸ್ ಸರ್ಕಲ್ ಬಳಿ ನಡೆದಿದೆ. ರವಿ ಮೃತ ದುರ್ದೈವಿ.

ಮೂರು ದಿನದ ಹಿಂದೆ ಎಸ್​ಆರ್​ಎಸ್ ಸರ್ಕಲ್ ಬಳಿ ಮೂವರು ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇದುತ್ತಿದ್ದರು. ಈ ಬಗ್ಗೆ ಪೀಣ್ಯ ಪೊಲೀಸರಿಗೆ ಮಾಹಿತಿ ಬಂದಿದ್ದು, ಬೀಟ್ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಪೊಲೀಸರನ್ನು ನೋಡಿ ಯುವಕರು ಕಾಲ್ಕಿತ್ತಿದ್ದಾರೆ.

ಈ ವೇಳೆ ರವಿ ಎನ್ನುವಾತ ಕಟ್ಟಡ ಹತ್ತಿದ್ದು, ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಇಂದು ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *