Breaking News

ಕೆಜಿಎಫ್‌ 2 ಚಿತ್ರದ ನಟನಿಗೆಅಪಘಾತ : ಅಪಾಯದಿಂದ ಪಾರು


ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಅನಿಲ್‌ಕುಂಬ್ಳೆ ವೃತ್ತದ ಬಳಿ ಬುಧವಾರ ಬೆಳಿಗ್ಗೆ ಕಾರು ಹಾಗೂ ಕಂಟೇನರ್‌ ಮಧ್ಯೆ ಅಪಘಾತ ಸಂಭವಿಸಿದ್ದು, ಕೆಜಿಎಫ್‌ 2 ಚಿತ್ರದ ನಟ ಬಿ.ಎಸ್. ಅವಿನಾಶ್‌ ಅಪಾಯದಿಂದ ಪಾರಾಗಿದ್ದಾರೆ.

ಅವಿನಾಶ್‌ ಅವರು ಈ ಚಿತ್ರದಲ್ಲಿ ಆಯಂಡ್ರೋಸ್ ಪಾತ್ರ ನಿರ್ವಹಿಸಿದ್ದರು. ಅವರು ಜಯನಗರದಿಂದ ತಮ್ಮ ಕಾರಿನಲ್ಲಿ ಎಚ್‌ಆರ್‌ಆರ್‌ ಲೇಔಟ್‌ಗೆ ತೆರಳುತ್ತಿದ್ದರು. ಎಂ.ಜಿ. ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಕಂಟೇನರ್‌ ಇವರ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಂಟೇನರ್‌ ಚಾಲಕ ಶಿವಗೌಡನನ್ನು ವಶಕ್ಕೆ ಪಡೆದು, ವಾಹನ ಜಪ್ತಿ ಮಾಡಲಾಗಿದೆ ಎಂದು ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *