ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ಶಿರಚ್ಛೇದ ಪ್ರಕರಣದಲ್ಲಿ ರಾಜಸ್ಥಾನ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಆರೋಪಿಗಳು ಇಡೀ ಅಪರಾಧದ ಹಿಂದಿನ ಸಂಚು ರೂಪಿಸುವಲ್ಲಿ ಹಾಗೂ ಸಿದ್ಧತೆಯಲ್ಲಿ ಭಾಗಿಯಾಗಿದ್ದರು ಎಂದು ಉದಯಪುರ ಐಜಿ ಪ್ರಫುಲ್ಲ ಕುಮಾರ್ ಮಾಹಿತಿ ನೀಡಿದ್ದಾರೆ.
ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಕನ್ಹಯ್ಯಲಾಲ್ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಇದರಿಂದ ಕೆರಳಿದ ದುಷ್ಕರ್ಮಿಗಳು ಬಟ್ಟೆ ಹೊಲಿಸುವ ನೆಪದಲ್ಲಿ ಕನ್ಹಯ್ಯಲಾಲ್ ಅಂಗಡಿಗೆ ತೆರಳಿ ಅವರ ಶಿರಚ್ಛೇದ ಮಾಡಿದ್ದರು. ಇದಾದ ಕೊಲೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಶಿರಚ್ಛೇದದ ಹೊಣೆಯನ್ನು ಹೊತ್ತಿದ್ದ ರಿಯಾಜ್ ಅಖ್ತರಿ ಹಾಗೂ ಘೌಸ್ ಮೊಹಮ್ಮದ್ ಪ್ರಧಾನಿ ಮೋದಿ ಹಾಗೂ ನೂಪುರ್ ಶರ್ಮಾರಿಗೂ ಬೆದರಿಕೆಯನ್ನು ನೀಡಿದ್ದರು. ಘಟನೆ ನಡೆದ ಮಾರನೇ ದಿನವೇ ರಾಜಸ್ಥಾನ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





