ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರು ಸ್ವಾಗತಿಸಿ, ಸರಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಅನುಭವಗಳನ್ನು ರಾಜ್ಯಪಾಲರೊಂದಿಗೆ ಹಂಚಿಕೊಂಡರು.
ಈ ಸಂದರ್ಭ ಮಾತನಾಡಿದ ಗೆಹ್ಲೋಟ್ ಅವರು ಕೇಂದ್ರ ಮತ್ತು ರಾಜ್ಯ ಸರಕಾರದ ಹಲವು ಕಾರ್ಯಕ್ರಮಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





